ಹೆಬ್ರಿ : ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರಿಂದ 26 ಪ್ರವಾಸಿಗರ ಹತ್ಯೆಗೆ ಪ್ರತಿಕಾರವಾಗಿ ಪಾಕಿಸ್ತಾನ ವಿರುದ್ಧ ಹೋರಾಡುತ್ತಿರುವ ಭಾರತೀಯ ಸೈನಿಕರ ನೈತಿಕ ಸ್ಥೈರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಹೆಬ್ರಿಯ ತಾಣ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಹೆಬ್ರಿಯ ದೇಶ ಭಕ್ತರಿಂದ ಪ್ರಾರ್ಥನೆ, ಪೂಜೆ ಶನಿವಾರ ನಡೆಯಿತು.

ದೇವಸ್ಥಾನದ ಅರ್ಚಕರಾದ ಕೆ. ರಮೇಶ್ ಭಟ್ ದೇವರಿಗೆ ಪೂಜೆ ಸಲ್ಲಿಸಿ, ಪ್ರಸಾದ ನೀಡಿದರು. ಸುಧಾಕರ ಶೆಟ್ಟಿ ಯವರು ದೇಶ ಪ್ರೇಮದ ಬಗ್ಗೆ ಅನಿಸಿಕೆ ವ್ಯಕ್ತ ಪಡಿಸಿದರು .ಎಲ್ಲರೂ ಗೆದ್ದು ಬಾ ಭಾರತ ಎಂದು ದೇವರಲ್ಲಿ ಪ್ರಾರ್ಥಿಸಿದರು. ಸಾಮಾಜಿಕ ಕಾರ್ಯಕರ್ತರಾದ ಶ್ರೀಕಾಂತ್ ಕುಚ್ಚೂರು ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.