Wednesday, August 19, 2026

spot_img

25 ಗಂಟೆಗಳ ನಿರಂತರ ದಾಸರಪದ ಗಾಯನಕ್ಕೆ ಸಂಗೀತ ಬಾಲಚಂದ್ರ ಸಜ್ಜು

ಉಡುಪಿ: ಸಂಗೀತ ಕ್ಷೇತ್ರದಲ್ಲಿ 25 ವರ್ಷಗಳ ಸುದೀರ್ಘ ಪಯಣ ಪೂರ್ಣಗೊಳಿಸಿರುವ ಆಕಾಶವಾಣಿಯ ಉನ್ನತ ಶ್ರೇಣಿಯ ಕಲಾವಿದೆ ಹಾಗೂ ಚಲನಚಿತ್ರ ಹಿನ್ನೆಲೆ ಗಾಯಕಿ ಸಂಗೀತ ಬಾಲಚಂದ್ರ ಅವರು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಸಾಧನೆಗಾಗಿ 25 ಗಂಟೆಗಳ ಕಾಲ ನಿರಂತರವಾಗಿ ದಾಸರಪದಗಳನ್ನು ಹಾಡುವ ಐತಿಹಾಸಿಕ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಭೀಮಾ ಜ್ಯುವೆಲ್ಲರ್ಸ್ ಪ್ರಾಯೋಜಕತ್ವದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಪಂಚವಿಂಶತಿ ಎಂದು ಹೆಸರಿಡಲಾಗಿದ್ದು, ಉಡುಪಿಯ ಶ್ರೀಕೃಷ್ಣ ಮಠದ ಸಮೀಪದ ಗೀತಾ ಮಂದಿರದ ಶ್ರೀ ಪುತ್ತಿಗೆ ನೃಸಿಂಹ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಆ.23ರಂದು ಬೆಳಗ್ಗೆ 6.30ಕ್ಕೆ ಆರಂಭವಾಗುವ ಗಾಯನ ಆ.24ರಂದು ಬೆಳಗ್ಗೆ 7.30ಕ್ಕೆ ಮುಕ್ತಾಯಗೊಳ್ಳಲಿದ್ದು, ಒಟ್ಟು 25 ಗಂಟೆ ಅಥವಾ 1,500 ನಿಮಿಷಗಳ ಕಾಲ ನಿರಂತರವಾಗಿ ದಾಸರಪದಗಳ ಗಾಯನ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಂಪೂರ್ಣವಾಗಿ ಹೊಸದಾಗಿ ಸ್ವರಸಂಯೋಜನೆ ಮಾಡಲಾದ 250 ದಾಸರಪದಗಳನ್ನು ಪ್ರಸ್ತುತಪಡಿಸಲಾಗುವುದು. ಕೀಬೋರ್ಡ್, ರಿದಮ್ ಪ್ಯಾಡ್, ಕೊಳಲು ಹಾಗೂ ತಬಲಾ ವಾದಕರನ್ನೊಳಗೊಂಡ ಎರಡು ಪ್ರತ್ಯೇಕ ತಂಡಗಳು ನಿರಂತರವಾಗಿ ಲೈವ್ ಸಂಗೀತ ಸಾಥ್ ನೀಡಲಿವೆ. ಮಹಿಳಾ ಗಾಯಕಿಯೊಬ್ಬರು ಪ್ರಮುಖವಾಗಿ ದಾಸರಪದಗಳನ್ನು ಆಯ್ಕೆ ಮಾಡಿಕೊಂಡು ಇಷ್ಟು ಸುದೀರ್ಘ ಅವಧಿಯವರೆಗೆ ನಿರಂತರ ಗಾಯನ ನಡೆಸುತ್ತಿರುವುದು ರಾಜ್ಯದಲ್ಲೇ ಅಪರೂಪದ ಹಾಗೂ ಮೊದಲ ಪ್ರಯತ್ನವಾಗಿದೆ ಎಂದು ಸಂಗೀತ ಬಾಲಚಂದ್ರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ರವೀಂದ್ರ ಪ್ರಭು, ಗುರುರಾಜ್, ಸಾಯಿರಾಂ, ವೇದವ್ಯಾಸ ಪುರಾಣಿಕ್, ಮೋಹನ್ ಪಡ್ರೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles