Sunday, June 29, 2025

spot_img

300 ಟ್ರೀಸ್ ಯೋಜನೆಯಡಿಯಲ್ಲಿ ಬೈಂದೂರಿನಲ್ಲಿ ವಿದ್ಯಾರ್ಥಿವೇತನ ವಿತರಣೆ

ಬೈಂದೂರು :ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ‌ ಆರಂಭಿಸಲಾಗಿರುವ 300 ಟ್ರೀಸ್ ಯೋಜನೆಯಡಿಯಲ್ಲಿ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ ಜರುಗಿತು.

ಬೈಂದೂರಿನ ರೋಟರಿ ಭವನದಲ್ಲಿ ಆಯೋಜಿಸಲಾದ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮದಲ್ಲಿ ದುಬೈ ಮೂಲದ ರಾಮಿ ಗ್ರೂಪ್ ಇದರ ಪ್ರವರ್ತಕರಾದ ಕಾಳಾವರ ವರದರಾಜ್ ಶೆಟ್ಟಿ ಅವರ ಸಹಕಾರದೊಂದಿಗೆ ಬೈಂದೂರು ತಾಲ್ಲೂಕಿನ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಶಾಸಕರು ವಿದ್ಯಾರ್ಥಿ ವೇತನ ವಿತರಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟಿ, ಸಮೃದ್ಧ ಜನ ಸೇವಾ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ ಇದರ ಟ್ರಸ್ಟಿಗಳಾ ಶ್ರೀ ಬಿ. ಎಸ್. ಸುರೇಶ್ ಶೆಟ್ಟಿ, ಮುಖ್ಯ ಅತಿಥಿಗಳಾಗಿ ಶ್ರೀ ಕಟ್ಕೇರಿ ಜಯಪ್ರಕಾಶ್ ಶೆಟ್ಟಿ, ಶ್ರೀ ಪ್ರಕಾಶ್ ಚಂದ್ರ ಶೆಟ್ಟಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles