ಉಡುಪಿ : ಲೋಕೋಪಯೋಗಿ ಇಲಾಖೆಯಿಂದ ಕಾಪು ವಿಧಾನಸಭಾ ಕ್ಷೇತ್ರದ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿಗೆ 75 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಜಂತ್ರ – ಮುದರಂಗಡಿ – ಶಿರ್ವ – ನಿಂಜೂರು ಜಿಲ್ಲಾ ಮುಖ್ಯ ರಸ್ತೆ ಸೇತುವೆ ಮಟ್ಟಕ್ಕೆ ಎತ್ತರಿಸಿ ಅಭಿವೃದ್ಧಿ – 37 ಲಕ್ಷ, ಹೆಜಮಾಡಿ – ಕೋಡಿ ಜಿಲ್ಲಾ ಮುಖ್ಯರಸ್ತೆ ಅಭಿವೃದ್ಧಿ – 17 ಲಕ್ಷ, ಎರ್ಮಾಳು – ಮುದರಂಗಡಿ ಜಿಲ್ಲಾ ಮುಖ್ಯರಸ್ತೆ ಅಭಿವೃದ್ಧಿ – 21 ಲಕ್ಷ ರೂಪಾಯಿ ಸೇರಿದಂತೆ ಒಟ್ಟು 75 ಲಕ್ಷ ರೂಪಾಯಿ ಅನುದಾನದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಮುದರಂಗಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮೋಹಿನಿ, ಗ್ರಾಮ ಪಂಚಾಯತ್ ಸದಸ್ಯರಾದ ರವೀಂದ್ರ ಪ್ರಭು, ಶಿವರಾಮ್ ಭಂಡಾರಿ, ಸ್ಥಳೀಯರಾದ ವಿಶ್ವನಾಥ್ ಶೆಟ್ಟಿ, ಹೆಜಮಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮೋಹನ್ ಸುವರ್ಣ, ಗ್ರಾಮ ಪಂಚಾಯತ್ ಸದಸ್ಯರಾದ ಶರಣ್ ಮಟ್ಟು, ಪಾಂಡುರಂಗ ಹೆಜಮಾಡಿ, ಪವಿತ್ರಾ ಗಿರೀಶ್, ವಸಂತಿ ವಿನೋದ್, ಜನಾರ್ಧನ ಕೋಟ್ಯಾನ್, ನಳಿನಾಕ್ಷಿ, ಸುಜಾತ, ಬಬಿತಾ, ಪ್ರಸಾದ್, ಲಿಲೇಶ್, ಸ್ಥಳೀಯರಾದ ಚಂದ್ರಹಾಸ್, ನಿತಿನ್, ಬಡಾ ಗ್ರಾಮ ಪಂಚಾಯತ್ ಸದಸ್ಯರಾದ ಶಂಕುತಳಾ, ಉಚ್ಚಿಲ ಮಹಾ ಶಕ್ತಿ ಕೇಂದ್ರದ ಚಂದ್ರಶೇಖರ್ ಕೋಟ್ಯಾನ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.


