Monday, June 30, 2025

spot_img

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ : ಓರ್ವನ ಬಂಧನ

ಬೆಂಗಳೂರು

   ಚಾಮರಾಜಪೇಟೆಯ   ಓಲ್ಡ್​ ಪೆನ್ಷನ್​ ಮೊಹಲ್ಲಾದ ವಿನಾಯಕನಗರದಲ್ಲಿ ಹಸುಗಳ   ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನನ್ನು ಕಾಟನ್ ​ಪೇಟೆ ಪೊಲೀಸರು ಬಂಧಿಸಿದ್ದಾರೆ. ಸೈಯದ್ ನಸ್ರು (30) ಬಂಧಿತ ಆರೋಪಿ. ಬಿಹಾರದ ಚಂಪರಣ್ ಮೂಲದ ಆರೋಪಿ ಸೈಯದ್ ನಸ್ರು, ಕೃತ್ಯ ನಡೆದ ಸ್ಥಳದಿಂದ 50 ಮೀಟರ್ ಅಂತರದಲ್ಲಿರುವ ಪ್ಲ್ಯಾಸ್ಟಿಕ್​​​, ಬಟ್ಟೆ ಹೊಲಿಯುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.

   ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವುದಾಗಿ ಆರೋಪಿ ಸೈಯದ್​ ನಸ್ರು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾನೆ. ಪೊಲೀಸರು ಆರೋಪಿಯನ್ನು ನ್ಯಾಯಾಧೀಶರ ​ ಮುಂದೆ ಹಾಜರುಪಡಿಸಿದ್ದು, ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

   ಹಸುವಿನ ಮಾಲೀಕ ಕರ್ಣ ಮಾತನಾಡಿ, ಆರೋಪಿ ಹುಚ್ಚ ಎಂದು  ಈಗ ಹೇಳುತ್ತಿದ್ದಾರೆ. ಹುಚ್ಚ ಈ ರೀತಿ ಮಾಡುವುದಕ್ಕೆ ಸಾಧ್ಯನಾ? ಕೃತ್ಯ ಎಸಗಿರುವ ಆ ವ್ಯಕ್ತಿಯನ್ನು ನಾನು ನೋಡಿದ್ದೇನೆ. ಬ್ಯಾಗ್ ಅಂಗಡಿಯವನಿಗೆ ಹಸುವಿನಿಂದ ತೊಂದರೆ ಆಗುತ್ತಿತ್ತು ಅನಿಸುತ್ತೆ. ಎಷ್ಟು ವರ್ಷದಿಂದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಮಾಲೀಕನನ್ನು ಕೇಳಿ. ಮೊದಲು ಬ್ಯಾಗ್ ಅಂಗಡಿ ಮಾಲೀಕನನ್ನು ಅರೆಸ್ಟ್ ಮಾಡಬೇಕು ಎಂದರು.

   ಹಸುಗಳ ಮಾಲೀಕ ಕರ್ಣ ಕಾಟನ್​ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ​ದೂರು ಆಧರಿಸಿ ಪ್ರರಕಣ ದಾಖಲಿಸಿಕೊಂಡ ಪೊಲೀಸರು ಭಾನುವಾರ ರಾತ್ರಿ ಓರ್ವ ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ಚಿಕ್ಕಪೇಟೆ ಉಪ ವಿಭಾಗದ ಎಸಿಪಿ ರಮೇಶ್ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಪೊಲೀಸರು ತನಿಖೆ ನಡೆಸಿದ್ದಾರೆ.
  ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹಸುಗಳು ಕ್ಷೇಮವಾಗಿವೆ. ಆದರೆ, ಇನ್ನೂ ಎರಡು ವಾರ ಗಾಯ ಮಾಸಲು ಸಮಯಬೇಕಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಪರ ಸಂಘಟನೆ ಮುಖಂಡರು, ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಪಿಸಿ ಮೋಹನ್, ಎಂಎಲ್​ಸಿ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ಮಾಲೀಕ ಕರ್ಣನಿಗೆ ಸಾಂತ್ವನ ಹೇಳಿದ್ದರು. ಘಟನೆಯನ್ನು ಖಂಡಿಸಿದ ನಾಯಕರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ವಿಪಕ್ಷ ನಾಯಕ‌ ಆರ್. ಅಶೋಕ್ ವೈಯುಕ್ತಿಕವಾಗಿ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದರು.
   ಚಾಮರಾಜಪೇಟೆಯ ಪಶು ಆಸ್ಪತ್ರೆಯನ್ನು ಕಬ್ಜಾ ಮಾಡಲು ಮುಂದಾಗಿದ್ದರು. ಈ ವೇಳೆ ನಾನು ಮತ್ತು ಸುತ್ತಮುತ್ತಲಿನ ಹಸುಗಳ ಮಾಲೀಕರು ಹಸುಗಳೊಂದಿಗೆ ಆಸ್ಪತ್ರೆ ಮುಂದೆ ಪ್ರತಿಭಟನೆ ಮಾಡಿದ್ವಿ. ಹೀಗಾಗಿ ಯಾರೋ ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ ಎಂದು ಹಸುಗಳ ಮಾಲೀಕ ಕರ್ಣ ಆರೋಪಿಸಿದ್ದಾರೆ.

Related Articles

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles