ಸಾಸ್ತಾನ : ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇವರ ನೇತ್ರತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ಎಸ್ ಸಿಐ ಲಿಜನ್ ಕೋಟ ಇವರುಗಳ ದೇಗುಲದ ಆಡಳಿತ ಮಂಡಳಿ ಇವರುಗಳ ಸಂಯೋಜನೆಯೊಂದಿಗೆ 241ನೇ ಭಾನುವಾರದ ಪರಿಸರ ಸ್ನೇಹಿ ಅಭಿಯಾನದ ಪ್ರಯುಕ್ತ ಸಾಸ್ತಾನ ಚೆಲ್ಲಮಕ್ಕಿ ದೇಗುಲ ಸ್ವಚ್ಛತಾ ಕಾರ್ಯ ನಡೆಯಿತು.

ಮಾಜಿ ತಾ.ಪಂ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್ ಅಭಿಯಾನಕ್ಕೆ ಚಾಲನೆ ನೀಡಿದರು.
ದೇಗುಲದ ಆಡಳಿತ ಮಂಡಳಿಯ ಪ್ರಮುಖರಾದ ಗಣೇಶ್ ಜಿ., ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.

