ಉಡುಪಿ : ಚಲಿಸುತ್ತಿದ್ದ ಬಸ್ ಚಾಲಕನಿಗೆ ಹಠಾತ್ ಎದೆ ನೋವು ಕಾಣಿಸಿಕೊಂಡು, ಬಸ್ ಹೆದ್ದಾರಿ ಪಕ್ಕಕ್ಕೆ ಇಳಿದ ಘಟನೆ ಪಡುಬಿದ್ರೆ ಸಮೀಪ ನಡೆದಿದೆ.

ತೆಂಕ ಎರ್ಮಾಳಿನ ಮಸೀದಿಯಿಂದ ಉಡುಪಿಯತ್ತ ಹೋಗುತ್ತಿದ್ದ ತಡೆರಹಿತ ಬಸ್ ನ ಚಾಲಕ ಶಂಭು ಎಂಬವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಬಸ್ ಚಾಲಕನ ನಿಯಂತ್ರ ತಪ್ಪಿ ಹೆದ್ದಾರಿ ಪಕ್ಕದ ಇಳಿಜಾರಿಗೆ ಸರಿದು ಮರಕ್ಕೆ ಢಿಕ್ಕಿ ಹೊಡೆದು ನಿಂತಿದೆ. ಘಟನಾ ಸ್ಥಳಕ್ಕೆ ಬಂದ ಸ್ಥಳಿಯರು ತಕ್ಷಣ ಬಸ್ ಚಾಲಕ ಹಾಗೂ ಗಾಯಗೊಂಡಿದ್ದ ಪ್ರಯಾಣಿಕರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.
