ಉಡುಪಿ : ವಿದ್ಯುಚ್ಛಕ್ತಿ ದರ ಪರಿಷ್ಕರಣೆ ಸಲುವಾಗಿ, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ, ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿಯು ಅರ್ಜಿ ಸಲ್ಲಿಸಿರುವ, ಹಿನ್ನಲೆ, ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲು, ಆಯೋಗವು ‘ಸಾರ್ವಜನಿಕ ವಿಚಾರಣೆ’ ಯನ್ನು ಫೆಬ್ರವರಿ 18 ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರು ಬಿಜೈ ಮೆಸ್ಕಾಂ ಭವನದ ಕಾರ್ಪೊರೇಟ್ ಕಛೇರಿ ಸಭಾಂಗಣದಲ್ಲಿ ನಡೆಸಲಿದ್ದು, ಆಸಕ್ತ ಸಾರ್ವಜನಿಕರು ವಿಚಾರಣೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.