Saturday, June 28, 2025

spot_img

ಕೊಲ್ಲೂರು ಮೂಕಾಂಬಿಕೆಯ ದರ್ಶನಗೈದ ಪ್ರಮೋದ್ ಸಾವಂತ್…

ಬೈಂದೂರು : ಬಸ್ರೂರು ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನಲೆಯಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಒಂದು ದಿನ ಉಡುಪಿ ಪ್ರವಾಸವನ್ನು ಕೈಗೊಂಡಿದ್ದಾರೆ. ಹೆಲಿಕಾಫ್ಟರ್ ವಿಮಾನವನ್ನು ಬಿಟ್ಟು ಸರಳವಾಗಿ ರೈಲು ಮೂಲಕ ಕರ್ನಾಟಕಕ್ಕೆ ಆಗಮಿಸಿದರು.

ಬೆಳ್ಳಂಬೆಳಗ್ಗೆ ಬಂದಿಳಿದ ಗೋವಾ ಮುಖ್ಯಮಂತ್ರಿಗಳನ್ನು ಬೈಂದೂರು ರೈಲ್ವೆ ನಿಲ್ದಾಣದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ಬರಮಾಡಿಕೊಂಡರು. ವಿಶ್ರಾಂತಿ ನಂತರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ಪ್ರಮೋದ್ ಸಾವಂತ್ ದೇವಿ ಮೂಕಾಂಬಿಕೆಯ ದರ್ಶನಗೈದರು. ವಿಶೇಷ ಪೂಜೆ ಕೈಗೊಂಡು, ಚಂಡಿಕಾ ಹೋಮದಲ್ಲಿ ಭಾಗಿಯಾದರು. ಇತರೆ ಎರಡು ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಗೋವಾಕ್ಕೆ ವಾಪಸ್ ಆಗಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles