Sunday, June 29, 2025

spot_img

ಬೈಂದೂರಿನ ಪಡುವರಿ ಹಾಗೂ ವಸ್ರೆಯಲ್ಲಿ ನಮ್ಮ ಕ್ಲಿನಿಕ್ ಉದ್ಘಾಟನೆ

ಬೈಂದೂರು : ಜನಸಾಮಾನ್ಯರಿಗೆ ಸುಲಭವಾಗಿ ಆರೋಗ್ಯಸೇವೆಗಳು ಲಭ್ಯವಾಗಬೇಕು ಎನ್ನುವ ನಿಟ್ಟಿನಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ. ರಾಘವೇಂದ್ರ ಅವರ ಸಹಕಾರದಿಂದ ಸ್ಥಾಪನೆಗೊಂಡಿರುವ ನಮ್ಮ ಕ್ಲಿನಿಕ್‌ ಆರೋಗ್ಯ ಕೇಂದ್ರವನ್ನು ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಉದ್ಘಾಟಿಸಿದರು.

ಬೈಂದೂರು ವಿಧಾನಸಭಾ ಕ್ಷೇತ್ರದ ತಾರಾಪತಿ ಪಡುವರಿ ಹಾಗೂ ವಸ್ರೆಯಲ್ಲಿ ಎರಡು ಸರ್ಕಾರಿ ನಮ್ಮ ಕ್ಲಿನಿಕ್‌ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸೇವೆಗಳು ದುಬಾರಿಯಾಗುತ್ತಿವೆ. ಜನಸಾಮಾನ್ಯರು, ಬಡವರು ಖಾಸಗಿ ಆಸ್ಪತ್ರೆಗಳಿಗಿಂತ ಸರ್ಕಾರಿ ಆಸ್ಪತ್ರೆಗಳನ್ನೇ ನೆಚ್ಚಿಕೊಂಡಿದ್ದಾರೆ. ಅವರಿಗೆ ಈ ನಮ್ಮ ಕ್ಲಿನಿಕ್‌ಗಳು ಸಹಕಾರಿಯಾಗಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ನಮ್ಮ ಕ್ಲಿನಿಕ್‌ನಲ್ಲಿ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳ 12 ಪ್ಯಾಕೇಜ್ ಸೇವೆಗಳು ಲಭ್ಯವಿರಲಿದೆ. ಗರ್ಭಿಣಿ ಮತ್ತು ಜನನ ಸಮಯದ ಆರೈಕೆ, ನವಜಾತ ಮತ್ತು ಶಿಶುವಿನ ಸಮಗ್ರ ಆರೋಗ್ಯ ಆರೈಕೆ, ಬಾಲ್ಯ ಮತ್ತು ಹದಿಹರೆಯದವರ ಸಮಗ್ರ ಆರೋಗ್ಯ ಸೇವೆಗಳು, ಸಾರ್ವತ್ರಿಕ ಲಸಿಕಾಕರಣ ಸೇವೆಗಳು, ಕುಟುಂಬ ಕಲ್ಯಾಣ, ಗರ್ಭನಿರೋಧಕ ಸೇವೆಗಳು ಮತ್ತು ಇತರ ಸಂತಾನೋತ್ಪತ್ತಿ ಆರೋಗ್ಯ ಸೇವೆಗಳು, ಸಾಂಕ್ರಾಮಿಕ ರೋಗಗಳ ನಿರ್ವಹಣೆ, ಸಾಮಾನ್ಯ ಮತ್ತು ಸಣ್ಣ ಪ್ರಮಾಣದ ಖಾಯಿಲೆಗಳಿಗೆ ಹೊರರೋಗಿ ಸೇವೆಗಳು, ಸಾಂಕ್ರಾಮಿಕ (ಟಿ.ಬಿ. ಕುಷ್ಠ ಇತ್ಯಾದಿ) ಮತ್ತು ಅಸಾಂಕ್ರಾಮಿಕ ರೋಗಗಳ (ಮಧುಮೇಹ, ಹೆಚ್ಚು ರಕ್ತದೊತ್ತಡ, ದೀರ್ಘಾವಧಿ ಶ್ವಾಸಕೋಶ ಕಾಯಿಲೆ, ಕೀಲು ನೋವು ಮತ್ತು ಸಂಧಿವಾತ ಬಾಯಿ, ಸ್ತನ ಮತ್ತು ಗರ್ಭಕಂಠ ಕ್ಯಾನ್ಸರ್ ಇತ್ಯಾದಿ) ಸ್ಕ್ರೀನಿಂಗ್, ತಡೆಗಟ್ಟುವಿಕೆ ಮತ್ತು ನಿರ್ವಹಣೆ, ಮೂಲಭೂತ ಬಾಯಿ ಆರೋಗ್ಯ ಸೇವೆಗಳು, ಮೂಲಭೂತ ನೇತ್ರ ಹಾಗೂ ಕಿವಿ, ಮೂಗು, ಗಂಟಲು ಆರೋಗ್ಯ ಆರೈಕೆ ಸೇವೆಗಳು, ಮಾನಸಿಕ ಆರೋಗ್ಯದ ಮೂಲಭೂತ ಸ್ತ್ರೀನಿಂಗ್ ಸೇವೆಗಳು, ಮೂಲಭೂತ ವೃದ್ಧಾಪ್ಯ ಆರೈಕೆ ಮತ್ತು ಉಪಶಮನಕಾರಿ ಆರೈಕೆ ಸೇವೆಗಳು, ಸುಟ್ಟ ಗಾಯಗಳು, ಅಪಘಾತ, ಮತ್ತಿತರ ಗಾಯಗಳು ಸೇರಿದಂತೆ ತುರ್ತು ವೈದ್ಯಕೀಯ ಸೇವೆಗಳು ಸಾರ್ವಜನಿಕರಿಗೆ ದೊರೆಯಲಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles