ಕಾಪು : ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆಗಳ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಲೋಕೋಪಯೋಗಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಅನುದಾನ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆಯನ್ನು ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು.

ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಡುಪಿ – ಸುಬ್ರಮಣ್ಯ ರಾಜ್ಯ ಹೆದ್ದಾರಿ ಅಭಿವೃದ್ಧಿ ಹಾಗೂ ಮೋರಿ ರಚನೆಗೆ 70 ಲಕ್ಷ, ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡುಬೆಳ್ಳೆ – ಪಾಜಕ ಸಂಪರ್ಕ ರಸ್ತೆ ಅಭಿವೃದ್ಧಿ 50 ಲಕ್ಷ, ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡುಬೆಳ್ಳೆ – ಕಂಡಿಗಾ ಸಂಪರ್ಕ ರಸ್ತೆ ಅಭಿವೃದ್ಧಿ 20 ಲಕ್ಷ ಸೇರಿದಂತೆ ಒಟ್ಟು 1 ಕೋಟಿ 40 ಲಕ್ಷ ರೂಪಾಯಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಬೆಳ್ಳೆ ಪಂಚಾಯತ್ ಅಧ್ಯಕ್ಷರಾದ ದಿವ್ಯ ಆಚಾರ್ಯ, ಬೆಳ್ಳೆ ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಂದ್ರ ಶೆಟ್ಟಿ, ಸುಧಾಕರ ಪೂಜಾರಿ, ಗುರುರಾಜ್ ಭಟ್, ಹರೀಶ್ ಶೆಟ್ಟಿ, ಪರಶುರಾಮ ಭಟ್, ಸಂದ್ಯಾ ಶೆಟ್ಟಿ, ಮೇರಿ ಡಿಸೋಜ, ತಾಲೂಕ್ ಪಂಚಾಯತ್ ಮಾಜಿ ಅಧ್ಯಕ್ಷರಾದ ದೇವದಾಸ್ ಹೆಬ್ಬಾರ್, ಶಂಕರ್ ದೇವಾಡಿಗ, ಅಸ್ಸಿಸ್ ನಿಲಯ ಚರ್ಚ್ ನ ಫಾದರ್ ಆದ ಸುನಿಲ್ ಡಿಸೋಜ, ಲಯನ್ಸ್ ಕ್ಲಬ್ ಅಧ್ಯಕ್ಷರಾದ ಐವನ್ ಗ್ರೇಗರಿ, ಉದಯ ಶೆಟ್ಟಿ ಕೃಷ್ಣ ಆಚಾರ್ಯ ಗಣೇಶ್ ಕುಲಾಲ್, ಕಿರಣ್ ಫೆರ್ನಾಂಡಿಸ್ ದಿನಕರ ಭಂಡಾರಿ ಉಪಸ್ಥಿತರಿದ್ದರು.