Sunday, June 29, 2025

spot_img

ಖಾಸಗಿ ಬಸ್‌ನ ನಿರ್ವಾಹಕ ಮತ್ತು ಬಸ್‌ನ ಚಾಲಕನನ್ನು ಬಂಧನ…

ಉಡುಪಿ: ಮಣಿಪಾಲದ ಟೈಗರ್ ಸರ್ಕಲ್ ಬಳಿ ಎ.2 ರಂದು ಸಂಜೆ 4:30ಕ್ಕೆ ಬಸ್ ನಿಲ್ದಾಣದಲ್ಲಿ ಟೈಮಿಂಗ್ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಖಾಸಗಿ ಬಸ್‌ನ ನಿರ್ವಾಹಕ ಮತ್ತು ಬಸ್‌ನ ಚಾಲಕನನ್ನು ಬಂಧಿಸಲಾಗಿದೆ.

ಆರೋಪಿಗಳಾದ ಆನಂದ್ ಬಸ್‌ನ ನಿರ್ವಾಹಕ ವಿಜಯ ಕುಮಾರ್ ಚಿತ್ರದುರ್ಗ(25) ಹಾಗೂ ಮಂಜುನಾಥ ಬಸ್ಸಿನ ಚಾಲಕ ಉಚ್ಚಿಲದ ಮೊಹಮ್ಮದ್ ಅಲ್ಪಾಜ್(25) ಟೈಮಿಂಗ್ ವಿಚಾರವಾಗಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕವಾಗಿ ಹೊಡೆದಾಡಿ ಕೊಂಡಿದ್ದರು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಓರ್ವ ರಾಜಾರೋಷವಾಗಿ ಕಬ್ಬಿಣದ ರಾಡ್ ಹಿಡಿದು ಬೆದರಿಸುವ ರೀತಿ ವರ್ತಿಸಿದ್ದು ಬಸ್ ನಿಲ್ದಾಣದಲ್ಲಿ ಇದ್ದ ಪ್ರಯಾಣಿಕರು ಈತನ ವರ್ತನೆ ಕಂಡು ಬೆಚ್ಚಿಬಿದ್ದಿದ್ದರು. ಘಟನೆ ಬಗ್ಗೆ ಬಸ್ಸಿನ ಕಂಡಕ್ಟರ್ ಮತ್ತು ಚಾಲಕರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಹಾಗೂ ಬಸ್‌ಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles