ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇದರ ಉಡುಪಿ ಜಿಲ್ಲಾ ಹದಿನೇಳನೆಯ ಕನ್ನಡ ಸಾಹಿತ್ಯ ಸಮ್ಮೇಳನ “ಸುಕೃತಿ 2025” ಉಡುಪಿ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಎ.30 & ಮೇ 1 ರಂದು ನಡೆಯಲಿದೆ. ಈ ಬಗ್ಗೆ ಜಿಲ್ಲಾ ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿಯನ್ನು ವಿವರಿಸಿದರು. ವಿದ್ವಾಂಸ, ನಿವೃತ್ತ ಪ್ರಾಚಾರ್ಯ ಡಾ. ಪಾದೇಕಲ್ಲು ವಿಷ್ಣು ಭಟ್ಟ ಅವರ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಏ.30 ರ ಬೆಳಿಗ್ಗೆ 8.30 ಕ್ಕೆ ಧ್ವಜಾರೋಹಣ, 9 ರಿಂದ ಸಮ್ಮೇಳನಾಧ್ಯಕ್ಷರನ್ನು ಎದಿರುಗೊಳ್ಳುವುದು. ಅದೇ ಸಮಯದಲ್ಲಿ ವಿಪಂಚಿ ಬಳಗ ಮಣಿಪಾಲ ಇವರಿಂದ ವೀಣಾವಾಣಿ ಕಾರ್ಯಕ್ರಮ ನಡೆಯಲಿದೆ ಎಂದರು.
ಅಂದು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥರು & ಕಿರಿಯ ಯತಿ ಶ್ರೀ ಸುಶೀಂಧ್ರತೀರ್ಥರು ಮಠದ ಕಿರಿಯ ಸ್ವಾಮೀಜಿ ಶ್ರೀ ಸುಶೀಂದ್ರತೀರ್ಥರು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ರಾಜ್ಯ ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಷಿ, ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡುವರು. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಸಾಂಸ್ಕೃತಿಕ ಕಾರ್ಯಕ್ರಮ ಅನಾವರಣ ಮಾಡಲಿದ್ದಾರೆ. ಉಡುಪಿ ಶಾಸಕ ಯಶಪಾಲ್ ಸುವರ್ಣ ಪುಸ್ತಕ ಮಳಿಗೆ ಉದ್ಘಾಟಿಸಲಿದ್ದಾರೆ. ಸಮ್ಮೇಳನದ ನಿಕಟಪೂರ್ವ ಅಧ್ಯಕ್ಷ ಹಿರಿಯ ವಿದ್ವಾಂಸ ಬಾಬು ಶಿವ ಪೂಜಾರಿ ಅವರು ಮಾತನಾಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಪೂರ್ವಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರು ಡಾ. ಪಾದೇಕಲ್ಲು ವಿಷ್ಣುಭಟ್ ರವರ ಗ್ರಂಥಾವಲೋಕನ, ಡಾ. ಮಂಜುನಾಥ ಕರಬರ ಕೆಂಪುಚುಕ್ಕಿ ಭಾವರೆಕ್ಕೆ, ಪೂರ್ಣೇಶ ಶಿವಪುರರವರ ಪೂರ್ಣಕುಂಭ ಪುಸ್ತಕ ಬಿಡುಗಡೆಗೊಳಿಸುವರು.
ಈ ವೇಳೆ ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ನಾಡೋಜಾ ಡಾ.ಜಿ.ಶಂಕರ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ರಘುಪತಿ ಭಟ್, ನಗರಸಭೆ ಸದಸ್ಯೆ ಮಾಲಿನಿ ಪೈ, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ನಗರಸಭಾ ಆಯುಕ್ತ ಡಾ. ಉದಯ ಶೆಟ್ಟಿ, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಾರುತಿ, ಶಾಲಾ ಶಿಕ್ಷಣ ಉಪ ನಿರ್ದೇಶಕ ಗಣಪತಿ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಯಲ್ಲಮ್ಮ ಹಾಗೂ ವಿವಿಧ ಅತಿಥಿ ಗಣ್ಯರು ಉಪಸ್ಥಿತರಿರಲಿದ್ದಾರೆ. ಬಳಿಕ ಅಚ್ಯುತ ಪೂಜಾರಿ ಮತ್ತು ಬಳಗದಿಂದ ಗೀತ ಗಾಯನ ನಡೆಯಲಿದೆ. ಬೆಳಿಗ್ಗೆ 11:30 ರಿಂದ ಭಾಷಾ ಸೌಹಾರ್ದ ವಿಷಯವಾಗಿ ಮೊದಲ ವಿಚಾರಗೋಷ್ಠಿ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಹಿರಿಯ ಸಾಹಿತಿ ವೀರಪ್ಪ ಮೊಯಿಲಿ ಹಾಗೂ ಮಾಜಿ ಸಂಸದ, ಸಾಂಸ್ಕೃತಿಕ ಚಿಂತಕ ಜಯಪ್ರಕಾಶ್ ಹೆಗ್ಡೆ ಅವರು ವಿಚಾರ ಮಂಡನೆ ಮಾಡಲಿದ್ದಾರೆ. ನಿವೃತ್ತ ಪ್ರಾಧ್ಯಾಪಕ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಪ್ರತಿಸ್ಪಂದನೆ ನೀಡಲಿದ್ದಾರೆ.
ಈ ವೇಳೆ ಶಿಕ್ಷಣ ಕ್ಷೇತ್ರದಿಂದ ಡಾ.ಲಕ್ಷ್ಮೀನಾರಾಯಣ ಕಾರಂತ್, ಸಂಶೋಧನೆ ಕ್ಷೇತ್ರದ ಡಾ.ಸಬಿತಾ ಕೊರಗ ಅವರಿಗೆ ವಿಶೇಷ ಗೌರವಾರ್ಪಣೆ ನಡೆಯಲಿದೆ. ಶಿಕ್ಷಕ ನರೇಂದ್ರ ಕುಮಾರ್ ಕೋಟ ಅವರು ಸಮನ್ವಯಕಾರರಾಗಿದ್ದಾರೆ. ಬಳಿಕ ಶತಮಾನದ ಸಾಧಕರ ವಿಷಯವಾಗಿ ವಿಶೇಷ ಉಪನ್ಯಾಸ ನಡೆಯಲಿದ್ದು, ಶಾಸನ ಹಸ್ತಪ್ರತಿ ಸಂರಕ್ಷಕ ಎಸ್.ವಿ ಕೃಷ್ಣಯ್ಯ ಉಪನ್ಯಾಸ ನೀಡಲಿದ್ದಾರೆ. ಮಧ್ಯಾಹ್ನ 1.30 ರಿಂದ ತಾಳಮದ್ದಳೆ ನಡೆಯಲಿದ್ದು, ಆ ಬಳಿಕ ಡಾ.ಬಿ.ಬಿ. ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ಜರುಗಲಿದೆ. ಮಧ್ಯಾಹ್ನ 2.30 ರಿಂದ ಎರಡನೇ ವಿಚಾರಗೋಷ್ಠಿ ನಡೆಯಲಿದೆ. ಕರಾವಳಿಯಲ್ಲಿ ಸಾಹಿತ್ಯ ಪರಿಷತ್ತು ಒಂದು ಅವಲೋಕನ ವಿಷಯದಲ್ಲಿ ಕಸಾಪ ಸ್ಥಾಪಕಾಧ್ಯಕ್ಷ ಎ.ಎನ್. ಹೆಬ್ಬಾರ್ ಸಮನ್ವಯಕಾರರಾಗಿರಲಿದ್ದಾರೆ. ಕೇಂದ್ರ ಕಸಾಪ ಗೌರವ ಕೋಶಾಧಿಕಾರಿ ಬಿ.ಎಂ. ಪಟೇಪ್ ಪಾಂಡು ಪ್ರತಿಸ್ಪಂದನ ನೀಡಲಿದ್ದಾರೆ. ಕಸಾಪ ದ.ಕ. ಜಿಲ್ಲೆಯ ಅಧ್ಯಕ್ಷ ಡಾ. ಶ್ರೀನಾಥ್, ಉತ್ತರ ಕನ್ನಡ ಜಿಲ್ಲೆಯ ಅಧ್ಯಕ್ಷ ಬಿ.ಎನ್. ವಾಸರೆ, ಕಾಸರಗೋಡು ಜಿಲ್ಲಾಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ್ ಭಾಗವಹಿಸಲಿದ್ದಾರೆ. ಈ ಸಂದರ್ಭ ಕಸಾಪ ಪೂರ್ವಾಧ್ಯಕ್ಷ ಉಪ್ಪುಂದ ಚಂದ್ರಶೇಖರ ಹೊಳ್ಳ ಅವರಿಗೆ ಗೌರವಾರ್ಪಣೆ ನಡೆಯಲಿದೆ. ಬಳಿಕ ಉಡುಪಿ ಪೂರ್ಣಪ್ರಜ್ಞ ಕಾಲೇಜು ಹಾಗೂ ಎಂಜಿಎಂ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ನಡೆಯಲಿದೆ. ಸಂಜೆ 5:45 ರಿಂದ ಮಠದ ದೈನಂದಿನ ಕಾರ್ಯಕ್ರಮ ಬಳಿಕ ಸಂಜೆ 7:00 ರಿಂದ ನೃತ್ಯವಸಂತ ನಾಟ್ಯಾಲಯ ಕುಂದಾಪುರ ತಂಡದಿಂದ ನೃತ್ಯ ಸಿಂಚನ ನಡೆಯಲಿದೆ.
ಮೇ 01 ರ ಗುರುವಾರ ಬೆಳಿಗ್ಗೆ ಪರ್ಕಳ ಸರಿಗಮ ಭಾರತಿ ಸಂಗೀತ ವಿದ್ಯಾಲಯದ ವಿದ್ಯಾರ್ಥಿಗಳಿಂದ ಅರುಣರಾಗ, ಬಳಿಕ ಬೆಳಗ್ಗೆ 10:00 ರಿಂದ ಕವಿಗೋಷ್ಠಿ ನಡೆಯಲಿದ್ದು, ಜ್ಯೋತಿ ಗುರುಪ್ರಸಾದ್ ಸಮನ್ವಯ ಮಾಡಲಿದ್ದಾರೆ. ಬಳಿಕ ನಮ್ಮ ಉಡುಪಿ ವಿಷಯದಲ್ಲಿ ವಿಚಾರಗೋಷ್ಠಿ ನಡೆಯಲಿದೆ. ಶೈಕ್ಷಣಿಕ ಮನ್ವಂತರ ವಿಷಯವಾಗಿ ಡಾ. ಅಶೋಕ್ ಕಾಮತ್, ಶಾಸನಗಳ ಸಮೀಕ್ಷೆ ವಿಷಯದಲ್ಲಿ ಡಾ.ಬಿ.ಜಗದೀಶ್ ಶೆಟ್ಟಿ, ಚಲನಚಿತ್ರ ಸಾಧನೆ ವಿಷಯದಲ್ಲಿ ಯಾಕೂಬ್ ಖಾದರ್ ಗುಲ್ವಾಡಿ ಹಾಗೂ ಪ್ರವಾಸೋದ್ಯಮ ವಿಷಯದಲ್ಲಿ ದಯಾನಂದ ಕರ್ಕೆರ ಉಗ್ನಲ್ ಬೆಟ್ಟು ಮಾತನಾಡಲಿದ್ದಾರೆ. ಮಧ್ಯಾಹ್ನ ತೆಂಕನಿಡಿಯೂರು ಕಾಲೇಜು ಹಾಗೂ ಶಿರ್ವ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ನಡೆಯಲಿದೆ. ಮಧ್ಯಾಹ್ನ 01 ರಿಂದ ಮಂಗಳೂರು ವಿವಿ ಉಪಕುಲಪತಿ ಡಾ.ಪಿ.ಎಲ್ ಧರ್ಮ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದದ ನಡೆಸಲಿದ್ದಾರೆ. ಮಧ್ಯಾಹ್ನ ಸಮ್ಮೇಳನಾಧ್ಯಕ್ಷರೊಂದಿಗೆ ಒಂದಿಷ್ಟು ಹೊತ್ತು ಮಾತುಕತೆ ನಡೆಯಲಿದೆ. ಬಳಿಕ ಬಹಿರಂಗ ಅಧಿವೇಶನ ನಡೆಯಲಿದೆ.
ಸಮಾರೋಪ
ಅಂದು ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥರು ಹಾಗೂ ಕಿರಿಯ ಶ್ರೀ ಸುಶೀಂಧ್ರತೀರ್ಥರು ಆರ್ಶೀವಚನ ನೀಡಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ. ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಸಮಾರೋಪ ನುಡಿಗಳನ್ನಾಡಲಿದ್ದಾರೆ. ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್ ಸಾಧಕರನ್ನು ಸನ್ಮಾನಿಸಲಿದ್ದಾರೆ. ಸಮ್ಮೇಳನಾಧ್ಯಕ್ಷ ಪಾದೇಕಲ್ಲು ವಿಷ್ಣುಭಟ್ ಪ್ರತಿಸ್ಪಂದನೆ ನೀಡಲಿದ್ದಾರೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಅಂಬಲಪಾಡಿ ಧರ್ಮದರ್ಶಿ
ಡಾ. ವಿಜಯ ಬಲ್ಲಾಳ್, ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ದಕ ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷ ಪ್ರದೀಪ ಕುಮಾರ್ ಕಲ್ಕೂರ, ತುಳುಕೂಟ ಅಧ್ಯಕ್ಷ ಇಂದ್ರಾಳಿ ಜಯಕರ್ ಶೆಟ್ಟಿ, ತಿಂಗಳೆ ಪ್ರತಿಷ್ಠಾನದ ಅಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗಡೆ ಸೇರಿದಂತೆ ವಿವಿಧ ಅತಿಥಿ ಗಣ್ಯರು ಉಪಸ್ಥಿತರಿರಲಿದ್ದಾರೆ.
ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ
ಡಾ. ಗಜೇಂದ್ರ ಗುಂಡ್ಮಿ (ಶಿಕ್ಷಣ), ಡಾ. ರವೀಂದ್ರ ಶೆಟ್ಟಿ ಬಜಗೋಳಿ (ಶಿಕ್ಷಣ ಮತ್ತು ಸಂಘಟನೆ), ಪ್ರತಾಪ್ ಕುಮಾರ್ ಉದ್ಯಾವರ (ಶಿಕ್ಷಣ ಮತ್ತು ಸಮಾಜ ಸೇವೆ), ರಂಗಪ್ಪಯ್ಯ ಹೊಳ್ಳ (ಸಂಕೀರ್ಣ), ಸುಗುಣ ಮೂಲ್ಯ ಪಡುಬಿದ್ರಿ ಕಂಚಿನಡ್ಕ (ಸಮಾಜ ಸೇವೆ), ಉದಯ ಕುಮಾರ್ ಶೆಟ್ಟಿ (ಸಂಕೀರ್ಣ), ಕೊಕೂಉ ಸೀತಾರಾಮ ಶೆಟ್ಟಿ (ಯಕ್ಷಗಾನ), ಸೂರಿ ಶೆಟ್ಟಿ ಕಾಪು ( ಸಮಾಜಸೇವೆ), ಅಪ್ಪು ಪಾಣಾರ ಶಿರ್ವ (ಪಾಡ್ದನ), ರಾಮಚಂದ್ರ ಆಚಾರ್ಯ ಪಡುಬಿದ್ರಿ (ಪತ್ರಕರ್ತರು), ಪ್ರಸನ್ನ ಶೆಟ್ಟಿಗಾರ್ ಮಂದಾರ್ತಿ (ಯಕ್ಷಗಾನ), ಸೀತಾ ಶ್ರೀನಿವಾಸ ಪಡುವರಿ (ಸಾಹಿತ್ಯ), ಈಶ್ವರ ಮಲ್ಪೆ (ಸಮಾಜ ಸೇವೆ), ರವಿ ಕಟಪಾಡಿ (ಸಮಾಜಸೇವೆ) ಯೋಗೀಶ್ ಭಟ್ ಹಳ್ಳಿ (ಸಂಕೀರ್ಣ), ವಿದುಷಿ ಸಂಸ್ಕೃತಿ ಪ್ರಭಾಕರ (ಯುವ ಪ್ರತಿಭೆ), ಯಡ್ತಾಡಿ ಸತೀಶ್ ಕುಮಾರ್ ಶೆಟ್ಟಿ (ಪ್ರಗತಿಪರ ಕೃಷಿಕ), ಸಂಘಸಂಸ್ಥೆಗಳ ವಿಭಾಗದಲ್ಲಿ ಕ್ರಿಯೇಟಿವ್ ಪುಸ್ತಕ ಮನೆ, ಭೂಮಿಕಾ ಹಾರಾಡಿ ರಿ. ಪಂಚಮಿ ಟ್ರಸ್ಟ್ ರಿ. ಉಡುಪಿ, ಭಾರತೀಯ ರೆಡ್ ಕ್ರಾಸ್ ಕುಂದಾಪುರ ಶಾಖೆ, ಶ್ರೀ ಜಟ್ಟಿಗೇಶ್ವರ ಯೂತ್ ಕ್ಲಬ್ ರಿ, ಲೈಟ್ ಹೌಸ್ ಗಂಗೊಳ್ಳಿ, ಸುನಿಲ್ ಬೈಂದೂರು ( ಕುಂದಾಪ್ರ ಡಾಟ್.ಕಾಂ) ಇವರುಗಳಿಗೆ ಸನ್ಮಾನ ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿ ಗೌರವ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಶೆಟ್ಟಿ, ಕೋಟ ನರೇಂದ್ರ ಕುಮಾರ್, ಸದಸ್ಯ ನರಸಿಂಹಮೂರ್ತಿ ಮಣಿಪಾಲ, ಬ್ರಹ್ಮಾವರ ತಾಲೂಕು ಅಧ್ಯಕ್ಷ ರಾಮಚಂದ್ರ ಭಟ್ ಉಪಸ್ಥಿತರಿದ್ದರು.