Wednesday, October 22, 2025

spot_img

ಕೊಲ್ಲೂರು ಸೌಪರ್ಣಿಕಾ ನದಿ ಬಳಿ ಬೆಂಗಳೂರು ಮೂಲದ ಮಹಿಳೆ ನಾಪತ್ತೆ, ಮುಂದುವರೆದ ಹುಡುಕಾಟ

ಉಡುಪಿ : ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಬಂದಿದ್ದ ಬೆಂಗಳೂರು ಮೂಲ ಮಹಿಳೆಯೋರ್ವರು ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದವರನ್ನು ಬೆಂಗಳೂರಿನ ವಸುಧಾ(46) ಎಂದು ಗುರುತಿಸಲಾಗಿದೆ. ಆ.27ರಂದು ದೇವಸ್ಥಾನಕ್ಕೆ ಆಗಮಿಸಿದ ವಸುಧಾ, ಅಕಸ್ಮಿಕವಾಗಿ ಸೌರ್ಪಣಿಕ ನದಿಯಲ್ಲಿ ಕಾಲು ಜಾರಿ ಬಿದ್ದು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಇವರು ಆಗಾಗ್ಗೆ ಕೊಲ್ಲೂರು ದೇವಳಕ್ಕೆ ಬರುತ್ತಿದ್ದ ಈ ಮಹಿಳೆ ಎಂದಿನಂದೆ ದೇವಳಕ್ಕೆ ಬಂದವರು ಸೌಪರ್ಣಿಕ ನದಿಗೆ ಇಳಿದವರು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಮಹಿಳೆಗಾಗಿ ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಹಾಗೂ ಅಗ್ನಿಶಾಮಕದಳ ಹುಡುಕಾಟ ನಡೆಸುತ್ತಿದೆ. ಇನ್ನು ಮಹಿಳೆಯು ದೇವಸ್ಥಾನ ಒಳಗಡೆ ಓಡಿಕೊಂಡು ಬರುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ನಾಪತ್ತೆಯಾದ ಮಹಿಳೆಯ ಹುಡುಕಾಟಕ್ಕೆ ನೀರಿನ ರಭಸ ತೀವ್ರವಾಗಿರುವುದರಿಂದ ಅಡ್ಡಿಯಾಗುತ್ತಿದೆ. ಆದರೂ, ಕಳೆದ ಎರಡು ದಿನಗಳಿಂದ ಈ ತಂಡ ಹುಡುಕಾಟ ನಡೆಸುತ್ತಿದ್ದು ಯಾವುದೇ ಸುಳಿವು ಲಭ್ಯವಾಗಿಲ್ಲ ಎಂದು ತಿಳಿದುಬಂದಿದೆ.ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles