ಕುಂದಾಪುರ : ಅಮಾಸೆಬೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್ (ರಿ.), ಅಮಾಸೆಬೈಲು, ಕರ್ಣಾಟಕ ಬ್ಯಾಂಕ್ (ಲಿ.) ಬೆಂಗಳೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಧರ್ಮಸ್ಥಳ, ಗ್ರಾಮ ಪಂಚಾಯತ್, ಅಮಾಸೆಬೈಲು, ವ್ಯವಸಾಯ ಸೇವಾ ಸಹಕಾರಿ ಸಂಘ ನಿ, ಅಮಾಸೆಬೈಲು ಹಾಗೂ ಬಿ. ವಿ. ಜಿ. ಕೊಡ್ಲಿ ಅಭಿಮಾನಿ ಬಳಗ ಇವರ ಸಹಯೋಗದಲ್ಲಿ. ನಡೆದ “ಕೊಡ್ಲಿ ನೆನಪು ಮತ್ತು ಉತ್ತಮ ಗ್ರಾಮ ಪಂಚಾಯತ್ ಗೆ ಸನ್ಮಾನ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಶಾಲಾ ಬಸ್ಸು ನಿರ್ವಹಣೆ ಬಗ್ಗೆ ಚೆಕ್ ವಿತರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರಾಸ್ತಾವಿಕ ಮಾತುಗಳನ್ನಾಡಿ, ಗ್ರಾಮೀಣ ಅಭಿವೃದ್ಧಿಯ ಚಿಂತನೆ ವಿಶಿಷ್ಟವಾದದ್ದು ತಮ್ಮ ಚಿಂತನೆಗಳ ಪ್ರಾಯೋಗಿಕ ಅನುಷ್ಠಾನಕ್ಕೆ ಅವರು ಆಯ್ಕೆ ಮಾಡಿಕೊಂಡವರು ಎಂದರು. ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಕೊಡ್ಗಿಯವರ ಜ್ಞಾನಗಳೆಲ್ಲವೂ ಅನುಭವ ದಾರಿತ ಅದಕ್ಕೆ ಪ್ರಾಯೋಗಿಕತೆಯ ಸ್ಪರ್ಶವಿದೆ ಎಲ್ಲಾ ಕ್ಷೇತ್ರಗಳಿಗೆ ಅಗತ್ಯವಾದ ಚಿಂತನೆಗಳು ಎ.ಜಿ.ಕೊಡ್ಗಿಯವರದ್ದು ಎಂದರು. ಕರ್ನಾಟಕ ಬ್ಯಾಂಕ್ ನ ಹಿರಿಯ ಅಧಿಕಾರಿ ವಾದಿರಾಜ್ ಭಟ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಇದೇ ಸಂದರ್ಭದಲ್ಲಿ ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊಡ ಮಾಡಿದ ಕೋಟತಟ್ಟು ಗ್ರಾಮ ಪಂಚಾಯತ್ ಗೆ ಜಿಲ್ಲಾ ಮಟ್ಟದ ಸಮಗ್ರ ಆಡಳಿತ ಗ್ರಾಮ ಪಂಚಾಯತ್ ನ ಈ ವರ್ಷದ ಪ್ರಶಸ್ತಿ ಪ್ರಧಾನವನ್ನು ಗೌರವಾನ್ವಿತ ಅತಿಥಿಗಳ ಉಪಸ್ಥಿತಿಯಲ್ಲಿ ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರೆ*, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಅವರಿಗೆ ಹಸ್ತಾಂತರಿಸಿದರು. ಮುಖ್ಯ ಅತಿಥಿಗಳಾಗಿ ಮಾಜಿ ಸಭಾಪತಿಗಳಾದ ಪ್ರತಾಪ್ ಚಂದ್ರ ಶೆಟ್ಟಿ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ, ಮಂಗಳೂರು ಕರ್ಣಾಟಕ ಬ್ಯಾಂಕ್ (ಲಿ), ಎಂ ಡಿ ರಾಘವೇಂದ್ರ ಎಸ್ ಭಟ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್ ಧರ್ಮಸ್ಥಳ, ಪತ್ರಕರ್ತ ಕೆ.ಸಿ ರಾಜೇಶ್, ಅಮಾಸೆಬೈಲು ಗ್ರಾಂ.ಪಂ. ಅಧ್ಯಕ್ಷೆ ಮಲ್ಲಿಕಾ ಕುಲಾಲ್, ಅಮಾಸೆಬೈಲು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸದಾನಂದ ಶೆಟ್ಟಿ ಹಾಗೂ ಪ್ರಮುಖರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ಅಶೋಕ್ ಕುಮಾರ್ ಕೊಡ್ಗಿ ಸ್ವಾಗತಿಸಿದರು, ಕಾರ್ಯಕ್ರಮವನ್ನು ಶ್ರೀಕಾಂತ್ ಸಿದ್ದಾಪುರ ನಿರ್ವಹಿಸಿದರು.