Wednesday, October 22, 2025

spot_img

ಸರ್ಪಂಗಳ ಸುಬ್ರಮಣ್ಯ ಭಟ್ ನೆನಪಿನ 14ನೇ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ : ಜೀವವಿಮಾ ನಿಗಮದ ನಿವೃತ್ತ ಅಧಿಕಾರಿಗಳೂ, ಕಲಾಪೋಷಕರೂ ಆಗಿದ್ದ, ಸರ್ಪಂಗಳ ಸುಬ್ರಮಣ್ಯ ಭಟ್ ನೆನಪಿನ 14ನೇ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಜರಗಿತು.

ಸುರತ್ಕಲ್, ಹನುಮಗಿರಿ ಮುಂತಾದ ವಿವಿಧ ಮೇಳಗಳಲ್ಲಿ 54 ವರ್ಷ ತಿರುಗಾಟ ಮಾಡಿದ ಹಿರಿಯ ಕಲಾವಿದ ವೇಣೂರು ಸದಾಶಿವ ಕುಲಾಲ್ ಇವರಿಗೆ ಸರ್ಪಂಗಳ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

MALYADI_CLICKK

 ಇದೇ ಸಂದರ್ಭದಲ್ಲಿ ಮೂರು ದಶಕಗಳ ಕಾಲ ಚಕ್ರತಾಳ ಕಲಾವಿದರಾಗಿ ಸೇವೆ ಸಲ್ಲಿಸಿದ ಸುರತ್ಕಲ್‌ನ ಪಿ. ಸುರೇಶ್ ಕಾಮತ್ ಇವರಿಗೆ ಸರ್ಪಂಗಳ ಪುರಸ್ಕಾರ ನೀಡಿ ಗೌರವಿಸಲಾಯಿತು. ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಪ್ರಶಸ್ತಿ ಪ್ರದಾನ ನೆರವೇರಿಸಿದರು. ನಳಿನೀ ಎಸ್. ಭಟ್ ಮತ್ತು ಮಕ್ಕಳು ಪ್ರಾಯೋಜಿಸಿದ ಈ ಕಾರ್ಯಕ್ರಮದಲ್ಲಿ ಡಾ. ಶೈಲಜಾ ಭಟ್, ಡಾ. ನರೇಂದ್ರ ಶೆಣೈ, ಅವಂತಿಕಾ, ಅನಿರುದ್ಧ ಉಪಸ್ಥಿತರಿದ್ದರು. ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ನಿರೂಪಿಸಿದ ಕಾರ್ಯಕ್ರಮದ ಬಳಿಕ ಪ್ರಸಿದ್ಧ ಕಲಾವಿದರಿಂದ ಉಷಾ ಪರಿಣಯ ಯಕ್ಷಗಾನ ಪ್ರದರ್ಶನಗೊಂಡಿತು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles