Saturday, June 28, 2025

spot_img

ಅಂಬಾಗಿಲು ಮೀನು ಮಾರುಕಟ್ಟೆಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯ ಅಂಬಾಗಿಲು ಮೀನು ಮಾರುಕಟ್ಟೆಗೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಡನೆ ಭೇಟಿ ನೀಡಿ ಮೀನು ಮಾರಾಟಗಾರ ಮಹಿಳೆಯರಿಂದ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಮಾಹಿತಿ ಪಡೆದರು.

ಮೀನು ಮಾರುಕಟ್ಟೆಯಲ್ಲಿ ಕೊಳಚೆ ನೀರು ಸರಾಗ ಹರಿಯಲು ಚರಂಡಿ ವ್ಯವಸ್ಥೆ, ನೆಲ ಹಾಸಿನ ಟೈಲ್ಸ್ ಅಳವಡಿಕೆ, ಮಹಿಳೆಯರಿಗೆ ಸುಸಜ್ಜಿತ ಶೌಚಾಲಯ, ಸೋಲಾರ್ ಲೈಟ್ ಅಳವಡಿಕೆ ಸಹಿತ ವಿವಿಧ ಬೇಡಿಕೆಗಳನ್ನು ಆದ್ಯತೆಯ ಮೇರೆಗೆ ನಗರಸಭೆ ಮೂಲಕ ಪರಿಹಾರ ಕಲ್ಪಿಸಲು ಕ್ರಮ ವಹಿಸುವುದಾಗಿ ಶಾಸಕರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ನಗರಸಭಾ ಸದಸ್ಯರಾದ ಜಯಂತಿ, ಬಾಲಕೃಷ್ಣ ಶೆಟ್ಟಿ, ಹರೀಶ್ ಶೆಟ್ಟಿ, ಗಿರಿಧರ ಆಚಾರ್ಯ ಕರಂಬಳ್ಳಿ, ಮೀನುಗಾರ ಮಹಿಳೆಯರು, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles