Monday, June 30, 2025

spot_img

ಆಟೋ ರಿಕ್ಷಾ ಚಾಲಕರ ಗೊಂದಲ : ಜಿಲ್ಲಾಧಿಕಾರಿ ಸಭೆ

ಉಡುಪಿ : ವಲಯ 2 ವಿಭಾಗದ ಆಟೋ ರಿಕ್ಷಾ ಚಾಲಕರು ಅನಿವಾರ್ಯ ಸಂದರ್ಭಗಳಲ್ಲಿ ಉಡುಪಿ ನಗರಕ್ಕೆ (ವಲಯ 1 ರ ವ್ಯಾಪ್ತಿಯಲ್ಲಿ) ತೆರಳಿದ ಸಂದರ್ಭದಲ್ಲಿ ಅಧಿಕಾರಿಗಳು ಹೆಚ್ಚಿನ ದಂಡ ವಿಧಿಸುತ್ತಿದ್ದು ಈ ಬಗ್ಗೆ ಇರುವ ಗೊಂದಲಗಳನ್ನು ನಿವಾರಿಸುವ ನಿಟ್ಟಿನಲ್ಲಿ ಇಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ವಲಯ 2 ರ ಆಟೋ ರಿಕ್ಷಾ ಚಾಲಕರು ಅನಿವಾರ್ಯ ಸಂದರ್ಭಗಳಲ್ಲಿ (ತುರ್ತು ಸಂದರ್ಭ/ಆಸ್ಪತ್ರೆಗೆ ತೆರಳುವಾಗ) ಉಡುಪಿ ನಗರಕ್ಕೆ ತೆರಳಿದ ಸಂದರ್ಭದಲ್ಲಿ ಯಾವುದೇ ರೀತಿಯ ದಂಡ ವಿಧಿಸಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಪೋಲಿಸ್ ವರಿಷ್ಠಾಧಿಕಾರಿಗಳಾದ ಅರುಣ್ ಕೆ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಎಲ್.ಪಿ ನಾಯಕ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles