Monday, June 30, 2025

spot_img

ಎ. ಪಿ. ಕೊಡಂಚ ಅವರಿಗೆ ‘ಸೇವಾ ಭೂಷಣ’ ಪ್ರಶಸ್ತಿ

ಉಡುಪಿ : ಯಕ್ಷಗಾನ ಕಲಾರಂಗದಲ್ಲಿ ಇಪ್ಪತ್ತೇಳು ವರ್ಷ ಕೋಶಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದ ಎಸ್.‌ ಗೋಪಾಲಕೃಷ್ಣ ಇವರ ನೆನಪಿನಲ್ಲಿ ಸಂಸ್ಥೆ ನೀಡುವ ಸೇವಾಭೂಷಣ ಪ್ರಶಸ್ತಿಗೆ ಈ ಬಾರಿ, ಕಳೆದ ೨೫ ವರ್ಷಗಳಿಗಿಂತಲೂ ಹೆಚ್ಚು ಕಾಲ ಬಳಕೆದಾರರ ವೇದಿಕೆಯಲ್ಲಿ ಸೇವೆಸಲ್ಲಿಸಿದ, ಸಾವಿರಾರು ಮಂದಿ ಸಂತ್ರಸ್ತರಿಗೆ
ಸೂಕ್ತ ಮಾರ್ಗದರ್ಶನ, ಬಳಕೆದಾರರಿಗಾಗಿ ಅನೇಕ ಕಮ್ಮಟ-ಕಾರ್ಯಗಾರಗಳನ್ನು ನಡೆಸಿದ್ದ, ಗ್ರಾಹಕ ಜಾಗೃತಿ ಕೃತಿಗಳನ್ನು ಹೊರತಂದಿರುವ ಕಾರ್ಪೊರೇಶನ್ ಬ್ಯಾಂಕ್‌ನ ನಿವೃತ್ತ ಅಧಿಕಾರಿಯಾಗಿರುವ ಮೌನ ಸಾಧಕ ಶ್ರೀ ಎ. ಪದ್ಮನಾಭ ಕೊಡಂಚ ಇವರು ಆಯ್ಕೆಗೊಂಡಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಫೆಬ್ರವರಿ ೨೮, ೨೦೨೫, ಶುಕ್ರವಾರ ಸಂಜೆ ೫.೦೦ಕ್ಕೆ ಯಕ್ಷಗಾನ ಕಲಾರಂಗದ ಐವೈಸಿ ಸಭಾಭವನದಲ್ಲಿ ಜರಗಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿರುತ್ತಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles