ಉಡುಪಿ : ಮಲ್ಪೆ ಕೊಡವೂರು ನಲ್ಲಿ ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನು ಪೊಲೀಸ್ ರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮಹಮದ್ ಫೈಸಲ್ ಖಾನ್(27), ಮೊಹಮದ್ ಶರೀಫ್ (37), ಅಬ್ದುಲ್ ಶುಕುರ್(43) ಕೊಲೆ ಆರೋಪಿಗಳು.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈ ಪ್ರಕರಣ ಬೇಧಿಸಲು ಪೊಲೀಸ್ ಉಡುಪಿ ಉಪವಿಭಾಗ ದಉಪಾಧೀಕ್ಷಕ ಡಿ.ಟಿ. ಪ್ರಭು ಮಾರ್ಗದರ್ಶನದಲ್ಲಿ, ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್, ನೇತೃತ್ವದಲ್ಲಿ ಮಲ್ಪೆ ಠಾಣೆ ಡಿ.ಪಿ.ಎಸ್.ಐ. ಅನಿಲ್ ಕುಮಾರ್ ಹಾಗೂ ಸಿಬ್ಬಂದಿಯವರ ವಿಶೇಷ ತಂಡ ಕಾರ್ಯಾಚರಣೆ ನಡೆಸಿರುತ್ತದೆ.