Sunday, June 29, 2025

spot_img

ಕಾಪು ಹೊಸ ಮಾರಿಗುಡಿ ಹಸಿರು ಹೊರೆ ಕಾಣಿಕೆ ಮೆರವಣಿಗೆ

ಕಾಪು : ಉಡುಪಿಯ ಕಾಪು ಹೊಸ ಮಾರಿಗುಡಿಯಲ್ಲಿ ವೈಭವದ ಬ್ರಹ್ಮಕಲಶೋತ್ಸವಕ್ಕೆ ಸಿದ್ಧತೆ ನಡೆದಿದೆ. ಸುಮಾರು 30 ಕೋಟಿ ವೆಚ್ಚದಲ್ಲಿ ಮೊದಲ ಹಂತದ ಮಾರಿಗುಡಿ ದೇಗುಲದ ಅಭಿವೃದ್ಧಿ ಕಾರ್ಯ ನಡೆದಿದೆ. ಹತ್ತು ದಿನಗಳ ಕಾಲ ನಡೆಯಲಿರುವ ವೈಭವದ ಬ್ರಹ್ಮಕಲಶೋತ್ಸವಕ್ಕೆ ಲಕ್ಷಾಂತರ ಭಕ್ತರು ಬರಲಿದ್ದಾರೆ.

ಪ್ರತಿದಿನ ಸಾವಿರಾರು ಭಕ್ತರಿಗೆ ಊಟೋಪಚಾರದ ವ್ಯವಸ್ಥೆ ನಡೆಯಲಿದೆ. ಈ ವೇಳೆಯಲ್ಲಿ ನಾಡಿನ ನಾನಾ ಭಾಗಗಳಿಂದ ಶ್ರೀಕ್ಷೇತ್ರಕ್ಕೆ ಹೊರೆ ಕಾಣಿಕೆ ಹರಿದು ಬರುತ್ತಿದೆ.

ಮೊದಲ ಹಂತದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಿಂದ ಹಸಿರು ಹೊರೆ ಕಾಣಿಕೆ ಮೆರವಣಿಗೆ ಹೊರಟಿದೆ. ಅನ್ನದಾಸೋಹಕ್ಕೆ ಬೇಕಾದ ಧಾನ್ಯ, ತರಕಾರಿ, ಅಕ್ಕಿ ಇತ್ಯಾದಿ ವಸ್ತುಗಳನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತಿದೆ.

ಸಾವಿರಾರು ಮಂದಿ ಈ ಹೊರೆ ಕಾಣಿಕೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles