Thursday, March 5, 2026

spot_img

ಗ್ರಾಮೀಣ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಹೊಲಿಗೆ ಯಂತ್ರ ವಿತರಣೆ

ಕುಂದಾಪುರ: ಗ್ರಾಮೀಣ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮವು ಕುಂದಾಪುರ ತಾಲೂಕು ಪಂಚಾಯಿತಿನ ಸಭಾಂಗಣದಲ್ಲಿ ನಡೆಯಿತು.

ಗ್ರಾಮೀಣ ಕುಶಲಕರ್ಮಿಗಳಿಗೆ ಕಿಟ್ ವಿತರಿಸಿ ಮಾತನಾಡಿದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿಯವರು ಗ್ರಾಮೀಣ ಕುಲ ಕಸುಬುದಾರರಿಗೆ ಆರ್ಥಿಕ ನೆರವು ನೀಡಲು ಹಾಗೂ ಸಾಮಾಜಿಕವಾಗಿ ಹಿಂದುಳಿದ ಬಡವರ್ಗದ ಜನರಿಗೆ ಗ್ರಾಮಗಳಲ್ಲಿಯೇ ಜೀವನಾಧಾರ ಕಲ್ಪಿಸಲು ಉಚಿತವಾಗಿ ಇಂದು 133 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು ತಾವು ಇದನ್ನು ಸಮರ್ಪಕವಾಗಿ ಕಿಟ್ ಅನ್ನು ಉಪಯೋಗಿಸಿಕೊಂಡು ಸ್ವಯಂ ಉದ್ಯೋಗವನ್ನು ಮಾಡುವ ಸಲುವಾಗಿ ಈ ಉದ್ದೇಶದಿಂದ ಗ್ರಾಮೀಣ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣ ಹೊಲಿಗೆ ಯಂತ್ರ ವಿಸ್ತರಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದ ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಉಡುಪಿ ಗ್ರಾಮೀಣ ಕೈಗಾರಿಕಾ ವಿಸ್ತರಣಾ ಅಧಿಕಾರಿ ಮಂಜುನಾಥ್ ಹೆಗಡೆ ಉಪಸ್ಥಿತರಿದ್ದರು. 133 ಫಲಾನುಭವಿಗಳಿಗೆ 9 ವಿವಿಧ ಗ್ರಾಮೀಣ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಹೊಲಿಗೆ ಯಂತ್ರವನ್ನು ವಿತರಿಸಲಾಯಿತು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles