Wednesday, March 4, 2026

spot_img

ಬಡವರ ಕಣ್ಣೀರೊರೆಸುವ ಕಾರ್ಯಕ್ಕಿಂತ ಮಿಗಿಲಾದ ಸೇವೆ ಇನ್ನೊಂದಿಲ್ಲ : ಬಿಷಪ್ ಜೆರಾಲ್ಡ್ ಲೋಬೊ

ಉಡುಪಿ: ಬಡವರ ಕಣ್ಣೀರೊರೆಸುವ ಕಾರ್ಯಕ್ಕಿಂತ ಮಿಗಿಲಾದ ಸೇವೆ ಇನ್ನೊಂದಿಲ್ಲ ಇದು ಪವಿತ್ರ ಧರ್ಮಸಭೆಯ ಆಶಯವೂ ಕೂಡ ಆಗಿದ್ದು ಪ್ರತಿಯೊಬ್ಬರು ಇನ್ನೊಬ್ಬರ ನೋವಿಗೆ ಸ್ಪಂದಿಸುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅಭಿಪ್ರಾಯಪಟ್ಟರು.

ಅವರು ಭಾನುವಾರ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಸಭಾಂಗಣದಲ್ಲಿ ಮೂತ್ರಪಿಂಡ ವೈಫಲ್ಯದಿಂದ ನರಳುತ್ತಿರುವ, ಉಡುಪಿ ಜಿಲ್ಲೆಯ ಅರ್ಹ  ಬಡರೋಗಿಗಳಿಗಾಗಿ 50% ರಿಯಾಯತಿ ದರದಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆಯುವ ನಿಟ್ಟಿನಲ್ಲಿ ಕಥೊಲಿಕ್ ಸಭಾ ಉಡುಪಿ ಪ್ರದೇಶ ಹಾಗೂ ದಾನಿ ಜೋಸೆಫ್ ಮಿನೇಜಸ್ ಸಾಸ್ತಾನ ಇವರ ನೇತೃತ್ವದಲ್ಲಿ ಮತ್ತು ಫ್ರೀಡಾ ರೇಗೊ ಮತ್ತು ಬೆಸಿಲ್ ಪಿಂಟೊ ಇವರ ಸಹಕಾರದೊಂದಿಗೆ ಟ್ರಿನಿಟಿ ಮೆಡಿಕೇರ್ ಸರ್ವಿಸ್ ಯೋಜನೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ ಆಶೀರ್ವಚನ ನೀಡಿದರು.

 ಕಾರ್ಯಕ್ರಮಲ್ಲಿ ಕಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಹೊರತಂದ ರಕ್ತದಾನಿಗಳ ವಿವರವುಳ್ಳ ಡೈರಕ್ಟರಿ, ಮುಂದಿನ ವರ್ಷದಲ್ಲಿ ಆರೋಗ್ಯ ಯೋಜನೆಗಳ ಸಹಾಯಾರ್ಥವಾಗಿ ಹಮ್ಮಿಕೊಂಡ ಜೋಶಲ್ ಅವರ ಸಂಗೀತ ಕಾರ್ಯಕ್ರಮದ ಪೋಸ್ಟರ್ ನ್ನು ಧರ್ಮಾಧ್ಯಕ್ಷರು ಅನಾವರಣಗೊಳಿಸಿದರು. ಸಾಂಕೇತಿಕವಾಗಿ ಮೂರು ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಗುರುತಿನ ಕಾರ್ಡ್ ಗಳನ್ನು ಹಸ್ತಾಂತರಿಸಲಾಯಿತು. ಇದೇ ವೇಳೆ ಕಥೊಲಿಕ್ ಸಭಾ ವತಿಯಿಂದ ಟ್ರಿನಿಟಿ ಮೆಡಿಕೇರ್ ಸರ್ವಿಸ್ ಯೋಜನೆಯ ರೂವಾರಿಗಳಾದ ಜೊಸೇಫ್ ಮಿನೇಜಸ್ ಸಾಸ್ತಾನ ಮತ್ತು ಬೆಸಿಲ್ ಪಿಂಟೊ ದಂಪತಿಗಳನ್ನು ಹಾಗೂ ಸ್ನೇಹಾಲಯ ಆಶ್ರಮದ ನಿರ್ದೇಶಕರಾದ ಜೋಸೇಫ್ ಕ್ರಾಸ್ತಾ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಥೊಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷರಾದ ರೊನಾಲ್ಡ್ ಆಲ್ಮೇಡಾ ವಹಿಸಿದ್ದರು. ವಾಗ್ಮಿ ರಫೀಕ್ ಮಾಸ್ಟರ್ ಮಂಗಳೂರು, ಡಾ|ಮೇಘಾ ಪೈ,  ಕಥೊಲಿಕ್ ಸಭಾ ಉಡುಪಿ ಪ್ರದೇಶ ನಿಕಟಪೂರ್ವ ಅಧ್ಯಕ್ಷ ಸಂತೋಷ್ ಕರ್ನೆಲಿಯೊ, ಕೋಶಾಧಿಕಾರಿ ಉರ್ಬಾನ್ ಲೂವಿಸ್ ಹಾಗೂ ಇತರರು ಉಪಸ್ಥಿತರಿದ್ದರು. ರೊನಾಲ್ಡ್ ಆಲ್ಮೇಡಾ ಸ್ವಾಗತಿಸಿ, ಜೊಯೇಲ್ ಆಲ್ಮೇಡಾ ವಂದಿಸಿದರು, ಆಲ್ವಿನ್ ಅಂದ್ರಾದ್ರೆ ಕಾರ್ಯಕ್ರಮ ನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles