Saturday, June 28, 2025

spot_img

ವರ್ಗಾವಣೆಗೊಂಡ ನ್ಯಾಯಧೀಶರಿಗೆ ಬೀಳ್ಕೊಡುಗೆ

ಕುಂದಾಪುರ: ಉಡುಪಿ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಳ್ಳುತ್ತಿರುವ ಪ್ರಧಾನ ಸಿವಿಲ್ ನ್ಯಾಯಧೀಶ ಹಾಗು ಜೆಎಮ್‌ಎಫ್‌ಸಿ  ವಿನಾಯಕ್ ವಾಂಖಾಂಡೆ ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಧೀಶ ಹಾಗು ಜೆಎಮ್‌ಎಫ್‌ಸಿ ಜೀತು ಆರ್.ಎಸ್ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಉಡುಪಿ ವಕೀಲರ ಸಂಘದ ವತಿಯಿಂದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ಪೋಕ್ಸೊ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಶ್ರೀನಿವಾಸ್ ಸುವರ್ಣ ಅಧ್ಯಕ್ಷತೆ ವಹಿಸಿ, ಇಬ್ಬರು ನ್ಯಾಯಧೀಶರು ಕೃಷ್ಣನೂರಿನಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ್ದಾರೆ. ಪಾರದರ್ಶಕತೆಯ ಮೂಲಕ ನ್ಯಾಯದಾನ ನೀಡುತ್ತಿದ್ದು, ಹಳೆಯ ಪ್ರಕರಣಗಳನ್ನು ವಿಲೇವಾರಿಗೊಳಿಸುವ ಮೂಲಕ ಎಲ್ಲರಿಗೂ ಸಮಾನವಾದ ನ್ಯಾಯ ಒದಗಿಸಿದ್ದಾರೆ ಎಂದು ನುಡಿದರು. 

ಎರಡನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಧೀಶ ಹಾಗು ಹೆಚ್ಚುವರಿ ಮುಖ್ಯ ದಂಡಾಧಿಕಾರಿ ಮನು ಪಟೇಲ್ ಬಿವೈ, ಉಡುಪಿ ವಕೀಲರ ಸಂಘದ ಉಪಾಧ್ಯಕ್ಷ ಮಿತ್ರಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಹಿರಿಯ ವಕೀಲರಾದ ಎನ್.ಕೆ ಆಚಾರ್ಯ ಹಾಗು ಹೆಚ್‌.ರಾಘವೇಂದ್ರ ಶೆಟ್ಟಿ ವರ್ಗಾವಣೆಗೊಳ್ಳುತ್ತಿರುವ ನ್ಯಾಯಧೀಶರ ಬಗ್ಗೆ ಶುಭಾಸಂಶನೆಗೈದರು. ನ್ಯಾಯವಾದಿ ಸೌಮ್ಯ ಪ್ರಾರ್ಥಿಸಿದರು. ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಸ್ವಾಗತಿಸಿದರು. ಪ್ರ.ಕಾರ್ಯದರ್ಶಿ ರಾಜೇಶ್ ಎಆರ್ ವಂದಿಸಿದರು. ನ್ಯಾಯವಾದಿ ಸಹನಾ ಕುಂದರ್ ನಿರೂಪಿಸಿದರು. 

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles