Friday, September 18, 2026

spot_img

ಶ್ರೀ ಕೃಷ್ಣ ಮಠದಲ್ಲಿ ಗಣೇಶ ವಿಗ್ರಹದ ಜಲಸ್ಥಂಭನ

ಉಡುಪಿ: ಶ್ರೀ ಕೃಷ್ಣ ಮಠದ ಪರ್ಯಾಯ ಶ್ರೀ ಶೀರೂರು ಮಠದಲ್ಲಿ ಭಾದ್ರಪದ ಚತುರ್ಥಿಯಂದು ಪ್ರತಿಷ್ಠಾಪಿಸಿ ಮೂರು ದಿನಗಳ ಕಾಲ ವಿಶೇಷ ಪೂಜೆ ಸಲ್ಲಿಸಲಾದ ಗಣೇಶ ವಿಗ್ರಹದ ಜಲಸ್ಥಂಭನ ಮೆರವಣಿಗೆ ಗುರುವಾರ ಸಾಂಪ್ರದಾಯಿಕವಾಗಿ ನಡೆಯಿತು.

ಪರ್ಯಾಯ ಪೀಠಾಧೀಶ ಶ್ರೀ ವೇದವರ್ಧನತೀರ್ಥರ ಉಪಸ್ಥಿತಿಯಲ್ಲಿ ಗಣೇಶ ವಿಗ್ರಹವನ್ನು ವಿಶೇಷವಾಗಿ ಅಲಂಕರಿಸಿ ರಥಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಮಠದ ದಿವಾನ ಉದಯಕುಮಾರ ಸರಳತ್ತಾಯ, ಪಾರುಪತ್ಯೆದಾರ ಶ್ರೀಶ ಭಟ್ ಕಡೆಕಾರು ಸೇರಿದಂತೆ ಮಠದ ಸಿಬ್ಬಂದಿ ಹಾಗೂ ಭಕ್ತರು ಪಾಲ್ಗೊಂಡಿದ್ದರು.

ರಥಬೀದಿಯಲ್ಲಿ ಸಾಗಿದ ಮೆರವಣಿಗೆಯ ಸಂದರ್ಭದಲ್ಲಿ ಭಕ್ತರು ಭಕ್ತಿಭಾವದಿಂದ ಪಾಲ್ಗೊಂಡು ಗಣೇಶನಿಗೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮೆರವಣಿಗೆಯು ಮಧ್ವಸರೋವರವನ್ನು ತಲುಪಿದ್ದು, ಅಲ್ಲಿ ಭಕ್ತಜನರ ಸಮ್ಮುಖದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ ಗಣೇಶ ವಿಗ್ರಹವನ್ನು ಜಲಸ್ಥಂಭನಗೊಳಿಸಲಾಯಿತು.

ಪರ್ಯಾಯ ಶ್ರೀ ಶೀರೂರು ಮಠದ ಆಶ್ರಯದಲ್ಲಿ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಮಠದ ಸಿಬ್ಬಂದಿ ಹಾಗೂ ಭಕ್ತರು ಭಾಗವಹಿಸಿ ಗಣೇಶನಿಗೆ ಪೂಜೆ ಸಲ್ಲಿಸಿ, ಧಾರ್ಮಿಕ ಸಂಪ್ರದಾಯದಂತೆ ವಿಗ್ರಹದ ವಿಸರ್ಜನಾ ಕಾರ್ಯಕ್ರಮವನ್ನು ನೆರವೇರಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles