ಉಡುಪಿ: ಆತ್ಮಾನಂದ ಸರಸ್ವತಿ ಕಿರಿಯ ತಾಂತ್ರಿಕ ಮಹಾವಿದ್ಯಾಲಯ ಬಿಲ್ಲಾಡಿ, ಯುವವಾಹಿನಿ ಉಡುಪಿ ಘಟಕ, ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ನ ಶ್ರೀ ಬ್ರಹ್ಮಾನಂದ ಸರಸ್ವತಿಯವರಿಗೆ ಅಭಿನಂದನಾ ಕಾರ್ಯಕ್ರಮ “ಮಹಾಭಿವಂದ್ಯ” ಬನ್ನಂಜೆಯ ನಾರಾಯಣಗುರು ಆಡಿಟೋರಿಯಂನಲ್ಲಿ ಮಾ.16 ರ ಸಂಜೆ 4 ಗಂಟೆಗೆ ನಡೆಯಲಿದೆ.
ಈ ಬಗ್ಗೆ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷ ದಯಾನಂದ ಕರ್ಕೇರಾ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮವನ್ನು ಉದ್ಯಮಿ ಡಾ.ಜಿ.ಶಂಕರ್ ಉದ್ಘಾಟಿಸಲಿದ್ದಾರೆ. ಆತ್ಮಾನಂದ ಸರಸ್ವತಿ ಕಿರಿಯ ತಾಂತ್ರಿಕ ಮಹಾವಿದ್ಯಾಲಯದ ಅಧ್ಯಕ್ಷ ಓಬು ಪೂಜಾರಿ ಅಧ್ಯಕತೆಯನ್ನು ವಹಿಸಲಿದ್ದಾರೆ. ಮಾಜಿ ಶಾಸಕ ರಘುಪತಿ ಭಟ್ ಅಭಿನಂದನಾ ಸನ್ನುಡಿಯನ್ನಾಡಲಿದ್ದಾರೆ. ಮೀನುಗಾರಿಕಾ ಸಚಿವ ಮಾಂಕಾಳ ವೈದ್ಯ ಅಭಿನಂದನಾರ್ಪಣೆ ಮಾಡಲಿದ್ದಾರೆ. ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯ್ ಕುಮಾರ್ ಸೊರಕೆ ಸೇರಿದಂತೆ ಮೊದಲಾದವರು ಉಪಸ್ಥಿತರಿರಲಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಓಬು ಪೂಜಾರಿ, ರಘುನಾಥ್ ಮಾಬಿಯಾನ್, ಭಾಸ್ಕರ್ ಸುವರ್ಣ, ಮಹಾಬಲ ಆಮೀನ್, ನಾರಾಯಣ ಬಿ.ಎಸ್ ಉಪಸ್ಥಿತರಿದ್ದರು.